ತುಮಕೂರು: ತುಮಕೂರು ವಿವಿಯ ಶೈಕ್ಷಣಿಕ ಅಭಿವೃದ್ಧಿಗಾಗಿ, ವಿದ್ಯಾರ್ಥಿಗಳ ಏಳ್ಗೆಗಾಗಿ ದುಡಿಯಲು ನಾನು ಸದಾ ಸಿದ್ಧ. ಮಾತಿಗಿಂತ ಕಾರ್ಯದಲ್ಲಿ ನನ್ನ ಸಾಧನೆ ತೋರಿಸುತ್ತೇನೆ. ವಿದ್ಯಾರ್ಥಿಗಳ ಶಿಕ್ಷಣ, ಆರೋಗ್ಯ ನನ್ನ ಆದ್ಯತೆಯಾಗಲಿದೆ ಎಂದು ನೂತನ ಕುಲಸಚಿವೆ ನಹಿದಾ ಜಮ್ ಜಮ್ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯ ಮಂಗಳವಾರ ಏರ್ಪಡಿಸಿದ್ದ ಸ್ವಾಗತ ಸಮಾರಂಭದಲ್ಲಿ ಮಾತನಾಡಿ, ಸಾಧ್ಯವಾದಷ್ಟೂ ಜಡತ್ವ ಬಿಟ್ಟು ಕೆಲಸ ಮಾಡೋಣ. ಒಗ್ಗಟ್ಟು ನಮ್ಮ ವಿಶ್ವವಿದ್ಯಾನಿಲಯದ ಸ್ಥಾನವನ್ನು ರಾಜ್ಯ, ದೇಶದ ಮಟ್ಟದಲ್ಲಿ ಹೆಸರುವಾಸಿ ಮಾಡಲಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಯಷ್ಟೇ ನಮ್ಮ ಗುರಿಯಾಗಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ನೂತನ ಕುಲಸಚಿವೆಯಾಗಿ ವಿಶ್ವವಿದ್ಯಾನಿಲಯದ ಜವಾಬ್ದಾರಿ ಹೆಚ್ಚಿದೆ. ಕಿರಿಯ ವಯಸ್ಸಿನಲ್ಲೇ ಕೆಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ಕೊರಟಗೆರೆಯಲ್ಲಿ ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸಿ, ಧಕ್ಷತೆಗೆ, ಸಾಮರ್ಥ್ಯಕ್ಕೆ ಹೆಸರುವಾಸಿಯಾಗಿರುವ ನೀವು ನಮ್ಮ ವಿವಿ ವಿದ್ಯಾರ್ಥಿಗಳಿಗೆ ಸದಾ ಪ್ರೇರಣೆ. ವಿವಿಯಲ್ಲಿ ಎಲ್ಲರಿಂದಲೂ ಸಹಕಾರ ದೊರೆಯಲಿದೆ ಎಂದರು.
Related Posts

ಕರುನಾಡಿನ ಭದ್ರಾ ಮೆಲ್ದಂಡೆ ಯೋಜನೆಗೆ ಮೋದಿ ಬಲ ! 5300ಕೋಟಿ ಬಿಡುಗಡೆ
ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಭದ್ರಾ ಮೆಲ್ದಂಡೆ ಯೋಜನೆಗೆ 5300 ಕೋಟಿ ಮೀಸಲಿಟ್ಟಿತ್ತು ಅಲ್ಲದೇ ಈ ಯೋಜನೆಯನ್ನು ರಾಷ್ಟೀಯ ಯೋಜನೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್…

ಪ್ರಶ್ನೆ ಪತ್ರಿಕೆ ಸೋರಿಕೆ ; ಪ್ರಥಮ ಪಿಯುಸಿ ಪರೀಕ್ಷೆ ಮುಂದಕ್ಕೆ
ತುಮಕೂರು: ಜಿಲ್ಲೆಯಲ್ಲಿ ಫೆ. 21ರಂದು ಮಂಗಳವಾರ ನಡೆಯಬೇಕಿದ್ದ ಪ್ರಥಮ ಪಿಯುಸಿ ಇಂಗ್ಲಿಷ್ ಪರೀಕ್ಷೆಯನ್ನು ಮುಂದೂಡಲಾಗಿದೆ, ಈ ಪರೀಕ್ಷೆ ಮಾರ್ಚ್ 6ರಂದು ನಡೆಯಲಿದೆ. ಪ್ರಥಮ ಪಿಯುಸಿ ಇಂಗ್ಲಿಷ್ ಭಾಷಾ…

ಹಳೇ ಶಾಲಾ ವಿದ್ಯಾರ್ಥಿಗಳಿಂದ ಗುರುಗಳಿಗೆ ಸನ್ಮಾನ
ಕೊರಟಗೆರೆ/ತೋವಿನಕೆರೆ: ಜೀವನದಲ್ಲಿ ಗುರಿ, ಚಲ, ಗುರುವಿನ ಆಶೀರ್ವಾದ ಇದ್ದರೆ ಮಾತ್ರವೇ ವಿದ್ಯೆ ಕಲಿತು ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಲು ಸಾಧ್ಯ, ನಾವು ಗಳಿಸಿದ ಆಸ್ತಿ, ಅಂತಸ್ತು, ಸಂಪತ್ತು…