ತುಮಕೂರು : ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 6 ರಂದು ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕು ಎಚ್ ಎ ಎಲ್ ಘಟಕ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಆ ದಿನದಂದು ಭಾರಿ ಸರಕು ಸಾಗಾಣಿಕೆ ವಾಹನಗಳು ಮತ್ತು ಕೆ ಎಸ್ ರ್ ಟಿ ಸಿ ಬಸ್ಗಳು ಈ ಕೆಳಕಂಡಂತೆ ಬದಲಿಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಆದೇಶಿಸಿದ್ದಾರೆ.
ಫೆ.6ರಂದು ನಿಟ್ಟೂರು ಕಡೆಯಿಂದ ಸಂಚರಿಸುವ ವಾಹನಗಳು ನಿಟ್ಟೂರು – ಟಿಬಿ ಕ್ರಾಸ್ – ತುರುವೇಕೆರೆ ಮಾರ್ಗವಾಗಿ ಕೆ.ಬಿ.ಕ್ರಾಸ್ಗೆ ಸಂಚರಿಸುವುದು. ತಿಪಟೂರಿನಿಂದ ಬರುವ ವಾಹನಗಳನ್ನು ಕೆಬಿಕ್ರಾಸ್ – ತುರುವೇಕೆರೆ – ಟಿಬಿ ಕ್ರಾಸ್ ಮಾರ್ಗವಾಗಿ ನಿಟ್ಟೂರಿಗೆ ಸಂಚರಿಸುವುದು.
ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆಮಾಡುವಂತೆ ಸೂಚಿಸಲಾಗಿದ್ದು, ತಪ್ಪಿದ್ದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ಕಾನೂನು ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಪೊಲೀಸ್ ಇಲಾಖೆಗೆ ಸೂಚಿಸಿದ್ದಾರೆ.