ತುಮಕೂರು : ಸಿದ್ದಗಂಗಾ ಮಠಕ್ಕೆ ಬಿಡುಗಡೆಯಾಗಿದ್ದ ಅನುದಾನವನ್ನು ಪುನಃ ಬಿಡುಗಡೆ ಮಾಡದಿದ್ದರೆ ಬೀದಿಗಿಳಿದು ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆಯನ್ನು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶ್ ಗೌಡ ನೀಡಿದ್ದಾರೆ.
ಅವರು ತಮ್ಮ ನೂತನ ಕಚೇರಿ ಉದ್ಘಾಟನಾ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಸಿದ್ದಗಂಗಾ ಮಠದ 10 ಕೋಟಿ ರೂ ಅನುದಾನ ಸೇರಿ ಗ್ರಾಮಾಂತರ ಕ್ಷೇತ್ರಕ್ಕೆ ಬಿಡುಗಡೆಯಾಗಿದ್ದ 20 ಕೋಟಿ ರೂ ಹಣವನ್ನು ಕಾಂಗ್ರೆಸ್ ಸರ್ಕಾರ ತಡೆ ಹಿಡಿದಿದೆ ಎಂದಿದ್ದಾರೆ. ಸಿದ್ದಗಂಗಾ ಮಠದ ಅನುದಾನವನ್ನು ಶಾಶ್ವತವಾಗಿ ತಡೆಹಿಡಿಯುವ ಧಮ್ಮು ಸರ್ಕಾರಕ್ಕೆ ಇಲ್ಲ, ಅನುದಾನ ಬಿಡುಗಡೆ ಮಾಡದೇ ಇದ್ದರೆ ಬೀದಿಗಿಳಿದು ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ, ಭ್ರಷ್ಟಾಚಾರ ಆಗಿದ್ದರೆ ತಡೆಹಿಡಿಯಲಿ ಅದನ್ನು ಬಿಟ್ಟು ಅನಾವಶ್ಯಕವಾಗಿ ತಡೆಹಿಡಿಯಬಾರದು ಎಂದರು.
ಕಾಂಗ್ರೆಸ್ ನವರು ಸುಳ್ಳು ಭರವಸೆ ಕೊಟ್ಟು ಹಿಂದಿನ ಬಾಗಿಲಿನಿಂದ ಚುನಾವಣೆ ಗೆದ್ದಿದ್ದಾರೆ ಕಾಂಗ್ರೆಸ್ನವರು ಹೇಳಿದಂತೆ ನಾನು ಕೂಡ 200 ಯೂನಿಟ್ ವರೆಗೆ ಬಿಲ್ ಕಟ್ಟಲ್ಲ ನಮ್ಮ ಯಾವ ಕಾರ್ಯಕರ್ತರು ಸಹ ಕರೆಂಟ್ ಬಿಲ್ ಕಟ್ಟಲ್ಲ. ಡಿಕೆ ಶಿವಕುಮಾರ್ ಅವರು ಮನೆ ಯಜಮಾನಿಗೆ ಎರಡು ಸಾವಿರ ಹಣ ಕೊಡ್ತೀನಿ ಅಂದರು ಆದರೆ ಈಗ ಅವರಿಗೆ ಸೊಸೆಗೆ ಹಣ ಹಾಕಬೇಕೊ ಅಥವಾ ಅತ್ತೆಗೆ ಹಣ ಹಾಕಬೇಕೊ ಅನ್ನುವ ಗೊಂದಲ ಶುರುವಾಗಿದೆ ಎಂದು ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ ಎಂದರು.