ತುಮಕೂರಿನಲ್ಲಿ ಹೆಚ್ಚಿದ ಕಣ್ಣಿನ ವೈರಸ್ ಪ್ರಕರಣಗಳು ! ಮುನ್ನೆಚ್ಚರಿಕೆ ಕ್ರಮವಹಿಸಲು ಸೂಚನೆ

ಕೆಲವು ದಿನಗಳಿಂದ ಹವಮಾನ ವ್ಯತ್ಯಾಸ ಮತ್ತು ನಿರಂತರವಾಗಿ ಬರುತ್ತಿರುವ ಮಳೆಯಿಂದ ಶಾಲಾ ಕಾಲೇಜು, ಹಾಸ್ಟೆಲ್ ಗಳಲ್ಲಿರುವವರಿಗೆ ಕಣ್ಣಿನ ವೈರಸ್ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಹಿಸಲು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ.

ಕೆಲವು ಜನರಲ್ಲಿ ಕಣ್ಣಿನ ಉರಿ, ಊತ, (ಕಂಜಂಕ್ಟಿವಿಟಿಸ್) ಸಮಸ್ಯೆ ಕಂಡುಬರುತ್ತಿದ್ದು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮತ್ತು ಮಾಹಿತಿಯನ್ನು ತಿಳಿಸುವುದು ಹಾಗೂ ಸಂಬಂಧಪಟ್ಟ ವೈದ್ಯಾಧಿಕಾರಿಗಳು ಆಸ್ಪತ್ರೆಗಳಿಗೆ ಬಂದ ಕಣ್ಣು ಉರಿ, ಊತ ರೋಗಿಗಳಿಗೆ ನೋವು ನಿವಾರಕ ಮಾತ್ರೆ ಮತ್ತು ಕಣ್ಣಿನ ಡ್ರಾಪ್ಸ್ ಚಿಕಿತ್ಸೆ ನೀಡುವುದು, ಹಾಗೆ ಮೂಗು ಮತ್ತು ಗಂಟಲಿನ ಸೋಂಕು ಇದ್ದಲ್ಲಿ ಅದಕ್ಕೆ ಬೇಕಾದ ಚಿಕಿತ್ಸೆ ನೀಡುವುದು, ಶಸ್ತ್ರಚಿಕಿತ್ಸೆಗೆ ಒಳಪಟ್ಟ ರೋಗಿಗಳಿಗೆ ಕಣ್ಣು ಉರಿ ಊತ ಇದ್ದಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯಿಂದ ಸೂಚಿಸಲಾಗಿದೆ.

ರೋಗದ ಲಕ್ಷಣಗಳು

  • ಕಣ್ಣಿನ ಬಿಳಿ ಭಾಗವೂ ಕೆಂಪಾಗುತ್ತದೆ
  • ಕಣ್ಣುಗಳಲ್ಲಿ ಉರಿ ಮತ್ತು ನೋವು ಇರುತ್ತದೆ
  • ಕಣ್ಣುಗಳಲ್ಲಿ ನಿರಂತರವಾಗಿ ನೀರು ಹೊರಬರುತ್ತದೆ.
  • ಕಣ್ಣುಗಳು ಊದಿಕೊಳ್ಳುತ್ತದೆ.

ಮುನ್ನೆಚ್ಚರಿಕೆ ಕ್ರಮಗಳು

  • ಹೆಚ್ಚಿನ ಜನ ಇರುವ ಪ್ರದೇಶಗಳಿಗೆ ಹೋಗುವುದನ್ನು ಕಡಿಮೆ ಮಾಡಬೇಕು.
  • ಪದೇ ಪದೇ ಕಣ್ಣುಗಳನ್ನು ಮುಟ್ಟುವುದನ್ನು ಕಡಿಮೆ ಮಾಡಬೇಕು
  • ಸೋಪ್ ನಲ್ಲಿ ಆಗಾಗ ಕೈ ತೊಳೆಯುವುದನ್ನು ಅಭ್ಯಾಸ ಮಾಡಬೇಕು
  • ಕಣ್ಣಿನ ಉರಿ ಊತ ಬಂದ ವ್ಯಕ್ತಿ ಬೇರೆಯವರ ಜೊತೆ ನಿಕಟ ಸಂಪರ್ಕ ಹೊಂದಬಾರದು.
  • ಅವರು ಉಪಯೋಗಿಸಿದ ಟವಲ್ ದಿಂಬು, ಬೆಡ್ ಶೀಟ್ ಗಳನ್ನು ಬೇರೆಯವರ ಉಪಯೋಗಿಸಬಾರದು.